ಶಿಕ್ಷಣ ಸಂಯೋಜಕ ರವೀಂದ್ರ ಮಾತನಾಡಿ, ‘ಗಡಿಕಟ್ಟೆ ಭಾಗದಲ್ಲಿ ಶಿಕ್ಷಣದಿಂದ ವಂಚಿತರಾಗಿದ್ದ ಅಲೆಮಾರಿ ಜನಾಂಗದ ಮಕ್ಕಳಿಗೆ ಶಿಕ್ಷಣ ಕೊಡಿಸಿ, ಅವರು ಮುಖ್ಯವಾಹಿನಿಗೆ ಬರುವಂತೆ ಮಾಡುವಲ್ಲಿ ಶಿಕ್ಷಕಿ ಶೈಲಜಾ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಕಾರಣಕ್ಕೆ ಪ್ರಶಸ್ತಿ ಅವರನ್ನು ಹುಡುಕಿಕೊಂಡು ಬಂದಿದೆ’ ಎಂದು ಹೇಳಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಂಗಾಧರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಎಚ್.ವಿ.ಚಂದ್ರಶೇಖರ್ ಹಾಜರಿದ್ದರು.