ಕೋಟತಟ್ಟು ಪಂಚಾಯಿತಿ ಮತ್ತು ಕಾರಂತ ಹುಟ್ಟೂರ ಪ್ರತಿಷ್ಠಾನ ನೀಡುವ 13ನೇ ವರ್ಷದ ಪ್ರಶಸ್ತಿಗೆ ಬಹುಭಾಷಾ ನಟ ಪ್ರಕಾಶ್ ರೈ ಅವರನ್ನು ಆಯ್ಕೆ ಮಾಡಿದ ಬಳಿಕ, ಅವರು ಸಾರ್ವಜನಿಕ ಸಭೆಯಲ್ಲಿ ನೀಡಿದ ಹೇಳಿಕೆಯನ್ನು ಗಮನಿಸಿ ಹಿಂದೂಪರ ಸಂಘಟನೆಗಳು, ಬಿಜೆಪಿಯವರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸುವ ಕುರಿತು ಹೇಳಿಕೆ ನೀಡಿದ್ದರು. ಅಲ್ಲದೇ ರೈ ಅವರಿಗೆ ಕಾರಂತರ ಹೆಸರಿನ ಪ್ರಶಸ್ತಿ ನೀಡದಂತೆ ಒತ್ತಾಯಿಸಿತ್ತು.