ಈ ಸಂಬಂಧ ಕೆಎಸ್ಒಯುಗೆ ಕಾಗದ ಪತ್ರ ಸಮಿತಿಯ ಅಧ್ಯಕ್ಷ ಸಾ.ರಾ. ಮಹೇಶ್ ಅವರು ಎರಡು ವರ್ಷಗಳಲ್ಲಿ ನಾಲ್ಕು ನೋಟಿಸ್ಗಳನ್ನು ಜಾರಿ ಮಾಡಿದ್ದಾರೆ. ಮೂರು ತಿಂಗಳು ಹೆಚ್ಚುವರಿ ಸಮಯ ನೀಡುವಂತೆ ವಿಶ್ವವಿದ್ಯಾಲಯದಿಂದ ಇತ್ತೀಚೆಗೆ ಸಮಯವನ್ನೂ ಕೇಳಲಾಗಿದೆ. ಆದರೆ, ನವೆಂಬರ್ನಲ್ಲಿ ನಡೆಯುವ ಚಳಿಗಾಲದ ಅಧಿವೇಶನ ವೇಳೆಗೆ ವರದಿ ಮಂಡಿಸಬೇಕಿರುವುರಿಂದ ಅವಧಿ ವಿಸ್ತರಣೆ ಸಾಧ್ಯವಿಲ್ಲ ಎಂದು ಸಮಿತಿ ಸ್ಪಷ್ಟಪಡಿಸಿದೆ.