ಲೀಲಾದೇವಿ ಆರ್.ಪ್ರಸಾದ್ ಮಾತನಾಡಿ, ‘ರಾಜಕಾರಣವೆಂದರೆ ಅಧಿಕಾರ ಹಿಡಿಯುವುದಕ್ಕೆ ಮಾತ್ರ ಸೀಮಿತವಲ್ಲ ಎಂಬುದನ್ನು ಜೆ.ಪಿ ತೋರಿಸಿದ್ದಾರೆ. ಆದರೆ, ಪ್ರಧಾನಿ ಮತ್ತು ಮಾಜಿ ಪ್ರಧಾನಿಗಳಂತಹ ರಾಷ್ಟ್ರಮಟ್ಟದ ಅನೇಕ ನಾಯಕರಲ್ಲಿ ಜೆ.ಪಿಯವರಲ್ಲಿದ್ದ ಗುಣ ಕಾಣಿಸುತ್ತಿಲ್ಲ. ಹಿರಿಯರನ್ನು ಕಡೆಗಣಿಸಿ, ಅಧಿಕಾರವನ್ನು ಸರ್ವಾಧಿಕಾರದತ್ತ ಕೊಂಡೊಯ್ಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜೆ.ಪಿಯವರ ವಿಚಾರಧಾರೆಗಳು ನಮ್ಮ ರಾಜಕೀಯ ವ್ಯವಸ್ಥೆಗೆ ಮಾರ್ಗದರ್ಶನವಾಗಬೇಕು’ ಎಂದು ಆಶಯ ವ್ಯಕ್ತಪಡಿಸಿದರು.