ಬೆಂಗಳೂರು: ಹನುಮಂತನಗರ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ರಸ್ತೆ ಬದಿ ನಿಲ್ಲಿಸಿದ 7 ಕಾರುಗಳ ಗಾಜುಗಳನ್ನು ದುಷ್ಕರ್ಮಿಗಳಿಬ್ಬರು ಮಚ್ಚಿನಿಂದ ಒಡೆದಿದ್ದಾರೆ.
ರಾತ್ರಿ 1.30ರ ಸುಮಾರಿಗೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ತ್ಯಾಗರಾಜನಗರದ ದತ್ತಾತ್ರೇಯ ದೇವಸ್ಥಾನದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಒಡೆದಿದ್ದಾರೆ. ಅವರನ್ನು ಹಿಡಿಯಲು ಯತ್ನಿಸಿದಾಗ ಬೈಕ್ನಲ್ಲಿ ಪರಾರಿಯಾಗಿದ್ದಾರೆ ಎಂದು ಜಖಂಗೊಂಡ ಕಾರಿನ ಮಾಲೀಕರೊಬ್ಬರು ತಿಳಿಸಿದರು.
‘ಯಾವ ಕಾರಣಕ್ಕೆ ಕಾರುಗಳನ್ನು ಒಡೆದಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಮೇಲ್ನೋಟಕ್ಕೆ ಪುಂಡಾಟಿಕೆ ನಡೆಸಲು ಈ ಕೃತ್ಯ ಎಸಗಿದ್ದಾರೆ ಎಂದು ಗೊತ್ತಾಗಿದೆ. ದುಷ್ಕರ್ಮಿಗಳ ಕೃತ್ಯದ ದೃಶ್ಯಾವಳಿಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹನುಮಂತನಗರ ಠಾಣೆಗೆ ದೂರು ನೀಡಿದ್ದೇವೆ’ ಎಂದರು.