‘ತಮಿಳುನಾಡಿನ ಭಾಸ್ಕರ್, ಪತ್ನಿ–ಮಕ್ಕಳ ಜತೆ ಹಲವು ವರ್ಷಗಳಿಂದ ಕಮರ್ಷಿಯಲ್ ಸ್ಟ್ರೀಟ್ನ ಲಾಡ್ಜ್ವೊಂದರಲ್ಲಿ ಉಳಿದುಕೊಂಡಿದ್ದಾನೆ. ಅ.10ರ ಮಧ್ಯಾಹ್ನ ಮೊದಲಿಯಾರ್ ಸ್ಟ್ರೀಟ್ಗೆ ಕಾರಿನಲ್ಲಿ ಬಂದಿದ್ದ ಆತ, ಅಲ್ಲಿನ ಅಂಗಡಿಗಳಲ್ಲಿ ಜೆರಾಕ್ಸ್ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿಯಿಂದ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದೆವು’ ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.