ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರಿಗೆ ಅವಹೇಳನ; ಜೆಡಿಎಸ್ ಪ್ರತಿಭಟನೆ

Last Updated 12 ಅಕ್ಟೋಬರ್ 2017, 7:30 IST
ಅಕ್ಷರ ಗಾತ್ರ

ಕುಣಿಗಲ್: ಶಾಸಕ ಡಿ.ನಾಗರಾಜಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಮುಖಂಡರು ಅವಹೇಳನ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಇಲ್ಲಿ ಪ್ರತಿಭಟನೆ ನಡೆಸಿದರು. ಅರೋಪಿಗಳನ್ನು ಬಂದಿಸುವಂತೆ ಸಿಪಿಐ ಬಾಳೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎನ್.ಜಗದೀಶ್ ಮಾತನಾಡಿ, ‘ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್ ಕುಮ್ಮಕಿನಿಂದ ಬಿಜೆಪಿ ಕಾರ್ಯಕರ್ತರು ಶಾಸಕರ ತೇಜೋವಧೆ ಮಾಡುತ್ತಿದ್ದಾರೆ. ಬಿಜೆಪಿ ಬೆಂಬಲಿತ ಎಪಿಎಂಸಿ ನಿರ್ದೇಶಕ ರಾಜಣ್ಣ ಅವರ ಪುತ್ರ ಹೇಮಂತ್ ಸಾಮಾಜಿಕ ಜಾಲತಾಣಗಳಲ್ಲಿ ನಾಗರಾಜಯ್ಯ ಅವರ ಬಗ್ಗೆ ಅಸಹ್ಯ ಪದಗಳನ್ನು ಬಳಸಿದ್ದಾರೆ’ ಎಂದು ದೂರಿದರು.

ಸಿಪಿಐ ಬಾಳೇಗೌಡ, ‘ಈಗಾಗಲೇ ಪ್ರಕರಣ ದಾಖಲಾಗಿದೆ. ಒಬ್ಬ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಉಳಿದವರನ್ನು ಶೀಘ್ರದಲ್ಲಿ ಬಂಧಿಸಲಾಗುವುದು’ ಎಂದು ಭರವಸೆ ನೀಡಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಲ್.ಹರೀಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹರೀಶ್ ನಾಯಕ್, ಪುರಸಭೆ ಸದಸ್ಯ ಅನ್ಸರ್ ಪಾಷಾ, ಮಾಜಿ ಉಪಾಧ್ಯಕ್ಷ ಅಬ್ದುಲ್ ಹಮೀದ್, ಬೆನವಾರ ಶೇಷಣ್ಣ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT