ಆಸ್ಪತ್ರೆ ವ್ಯಾಪ್ತಿಗೆ ಒಳಪಟ್ಟ ಬೋಯಿಪಲ್ಲಿ ಗ್ರಾಮದಲ್ಲಿ ಒಂದು ತಿಂಗಳ ಹಿಂದೆ ಚೌಡಮ್ಮ ಎಂಬುವವರಿಗೆ ಗಂಡು ಮಗು ಜನಿಸಿತ್ತು. ಮಗು ತೀವ್ರ ಜ್ವರ ಮತ್ತು ಕಾಮಾಲೆಯಿಂದ ಬಳಲುತ್ತಿದ್ದ ಕಾರಣ ಪೋಷಕರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದರು. ವೈದ್ಯರು ತುರ್ತಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ಪೋಷಕರು 108 ಆಂಬುಲೆನ್ಸ್ ಬಗ್ಗೆ ವಿಚಾರಿಸಿದಾಗ ಚಾಲಕ ನಮ್ಮಲ್ಲಿ ಶುಶ್ರೂಷಕರು ಇಲ್ಲ. ಖಾಸಗಿ ವಾಹನದಲ್ಲಿ ಕರೆದುಕೊಂಡು ಹೋಗಿ ಎಂದು ಹೇಳಿದ್ದರು ಎನ್ನಲಾಗಿದೆ.