ಬೆಂಗಳೂರು: ನಟ ಶಿವರಾಜ್ ಕುಮಾರ್ ಗುರುವಾರ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರ ಜೆ.ಪಿ ನಗರ ನಿವಾಸಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಅರ್ಧಗಂಟೆ ಮಾತುಕತೆ ನಡೆಸಿ, ಸಾಕಷ್ಟು ದಿನ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದರು. ಸೊರಬ ಶಾಸಕ ಮಧು ಬಂಗಾರಪ್ಪ ಜತೆಯಲ್ಲಿದ್ದರು.
ಕಳೆದ ತಿಂಗಳು ನಾಲ್ಕು ಗಂಟೆಗಳ ತೆರೆದ ಹೃದಯದ ಶಸ್ತ್ರಚಿಕಿತ್ಸೆ ನಡೆಸಿ ಎಚ್ಡಿಕೆ ಅವರ ಹೃದಯ ಕವಾಟವನ್ನು ಬದಲಾಯಿಸಲಾಗಿದೆ.