ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರುಷಿ ಕೊಲೆ ಪ್ರಕರಣ: ರಾಜೇಶ್- ನೂಪುರ್ ದಂಪತಿ ಖುಲಾಸೆ

Last Updated 13 ಅಕ್ಟೋಬರ್ 2017, 9:09 IST
ಅಕ್ಷರ ಗಾತ್ರ

ಅಲಹಾಬಾದ್‌: ಆರುಷಿ- ಹೇಮರಾಜ್ ಅವಳಿ ಕೊಲೆ ಪ್ರಕರಣದಿಂದ ತಲ್ವಾರ್ ದಂಪತಿ ರಾಜೇಶ್‌ ಮತ್ತು ನೂಪುರ್ ಅವರನ್ನು ಅಲಹಾಬಾದ್‌ ಹೈಕೋರ್ಟ್‌ ಖುಲಾಸೆಗೊಳಿಸಿದೆ.

2008ರಲ್ಲಿ ನಡೆದಿದ್ದ ಈ ಕೊಲೆ ಪ್ರಕರಣದ ವಿಚಾರಣೆ ನಡೆಸಿದ್ದ ಗಾಜಿಯಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯವು 2013ರ ನವೆಂಬರ್‌ 26ರಂದು ತಲ್ವಾರ್‌ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ತಲ್ವಾರ್‌ ದಂಪತಿ ಅಲಹಾಬಾದ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ರಾಜೇಶ್‌ ಮತ್ತು ನೂಪುರ್‌ ದಂಪತಿ ತಮ್ಮ ಮಗಳು ಮತ್ತು ಮನೆ ಕೆಲಸದ ಸಹಾಯಕ ಹೇಮರಾಜ್‌ ಕೊಲೆಯ ಹೊಣೆಗಾರರಲ್ಲ ಎಂದು ನ್ಯಾಯಪೀಠ ಹೇಳಿದೆ.

</p><p>ರಾಜೇಶ್‌ ಮತ್ತು ನೂಪುರ್‌ ಅವರೇ ಈ ಜೋಡಿ ಕೊಲೆ ಮಾಡಿದ್ದಾರೆ ಎಂಬುದಕ್ಕೆ ಸೂಕ್ತವಾದ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.<br/>&#13; <br/>&#13; ‘ಕೇವಲ ಶಂಕೆಯ ಆಧಾರದ ಮೇಲೆ ತಲ್ವಾರ್‌ ದಂಪತಿಯನ್ನು ದೋಷಿಗಳು ಎಂದು ತೀರ್ಮಾನಿಸಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಹೇಳಿದೆ.<br/>&#13; <br/>&#13; <img alt="" src="https://cms.prajavani.net/sites/pv/files/article_images/2017/10/12/kjgfkjff.jpg" style="width: 600px; height: 331px;" data-original="/http://www.prajavani.net//sites/default/files/images/kjgfkjff.jpg"/><br/>&#13; <strong>ಹೇಮರಾಜ್ – ಆರುಷಿ</strong></p><p><strong>ಏನಿದು ಪ್ರಕರಣ: </strong>2008 ಮೇ 15 ರ ರಾತ್ರಿ ನೋಯಿಡಾದ ಜಲ್‌ವಾಯು ವಿಹಾರ ನಿವಾಸದಲ್ಲಿ ಆರುಷಿ ಹಾಗೂ ಮನೆ ಕೆಲಸದ ಸಹಾಯಕ ಹೇಮರಾಜ್‌ ಅವರ ಕೊಲೆ ನಿಗೂಢವಾಗಿ ನಡೆದಿತ್ತು. ಆನಂತರ ಕೊಲೆ ತನಿಖೆ ಆರಂಭಿಸಿದ್ದ ಉತ್ತರ ಪ್ರದೇಶ ಪೊಲೀಸರು ಹಾಗೂ ಸಿಬಿಐ ಆರುಷಿ ಪೋಷಕರ ಮೇಲೆ ಕೊಲೆ ಆರೋಪ ಹೊರಿಸಿದ್ದರು.</p><p>ಮಾಧ್ಯಮಗಳಿಂದ ಭಾರಿ ಪ್ರಚಾರ ಪಡೆದ ಈ ಪ್ರಕರಣದ ವರದಿ ಪ್ರಸಾರದ ಮೇಲೆ 2009 ರ ಸುಪ್ರೀಂಕೋರ್ಟ್‌ ತಡೆ ಒಡ್ಡಿತ್ತು. ಮೊದಲಿಗೆ ಹೇಮರಾಜ್‌ ಆರುಷಿಯನ್ನು ಕೊಲೆ ಮಾಡಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ಶಂಕಿಸಿದ್ದರು. ಆದರೆ ಆತನ ಶವ ತಾರಸಿಯಲ್ಲಿ ಮಾರನೇ ದಿನ ಪತ್ತೆಯಾಗಿದ್ದರಿಂದ ಆತ ಈ ಕೊಲೆ ಮಾಡಿರಲಿಕ್ಕಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದರು. ಪ್ರಕರಣದ ಗಂಭೀರತೆ ಅರಿತ ಅಂದಿನ ಮುಖ್ಯಮಂತ್ರಿ ಮಾಯಾವತಿ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರು.<br/>&#13; <br/>&#13; <strong>ಇದನ್ನೂ ಓದಿ...<br/>&#13; <a href="http://www.prajavani.net/news/article/2017/10/12/525661.html">ರಾಜೇಶ್- ನೂಪುರ್ ದಂಪತಿ ನಾಳೆ ಬಿಡುಗಡೆ ಸಾಧ್ಯತೆ</a></strong></p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT