ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾನ ವೇತನ ನೀಡಲು ಒತ್ತಾಯ

Last Updated 12 ಅಕ್ಟೋಬರ್ 2017, 10:19 IST
ಅಕ್ಷರ ಗಾತ್ರ

ಕಲಬುರ್ಗಿ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಒತ್ತಾಯಿಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರು ಕರ್ನಾಟಕ ದಲಿತ ಸರ್ವೋದಯ ಸಮಿತಿ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ಮಾಡಿದರು.

ಬಸ್ ನಿಲ್ದಾಣದ ಆವರಣದಲ್ಲಿ 20 ವರ್ಷಗಳಿಂದ ಸ್ವಚ್ಛತಾ ಕೆಲಸ ಮಾಡುತ್ತಿದ್ದೇವೆ. ಆದರೆ ಸಮಾನ ವೇತನ ಹಾಗೂ ಭವಿಷ್ಯನಿಧಿ, ಇಎಸ್‌ಐ ಸೌಲಭ್ಯ ನೀಡುತ್ತಿಲ್ಲ. ಆದ್ದರಿಂದ ಕಾರ್ಮಿಕ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘದ ಉತ್ತರ ಕರ್ನಾಟಕ ಅಧ್ಯಕ್ಷ ವಿ.ಎಚ್.ವಾಲೀಕಾರ, ಪ್ರಧಾನ ಕಾರ್ಯದರ್ಶಿ ಹುಸೇನ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT