ಅಧ್ಯಕ್ಷತೆ ವಹಿಸಿದ್ದ ಮುಖಂಡ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ‘ಗ್ರಾಮೀಣ ಪ್ರದೇಶದ ಯುವ ಜನರು ಹುಟ್ಟೂರಿನ ಅಭಿವೃದ್ಧಿಗೆ ಒಗ್ಗೂಡಿ ಶ್ರಮಿಸಬೇಕು. ಬೆಳವಾಡಿ ಗ್ರಾಮ ಮೈಸೂರು ನಗರಕ್ಕೆ ತೀರಾ ಹತ್ತಿರದಲ್ಲಿದ್ದು ಶಿಕ್ಷಣ ಸಂಸ್ಥೆಗಳು, ದೊಡ್ಡ ಕೈಗಾರಿಕೆಗಳು ತಲೆ ಎತ್ತುತ್ತಿವೆ. ಈ ಭಾಗದ ಭೂಮಿಗೆ ನಿರೀಕ್ಷೆಗೂ ಮೀರಿ ಬೆಲೆ ಬಂದಿದೆ. ರೈತರು ತಮ್ಮ ಕೃಷಿ ಜಮೀನು ಮಾರಿಕೊಳ್ಳದೆ ಮುಂದಿನ ತಲೆಮಾರಿಗೆ ಉಳಿಸಬೇಕು’ ಎಂದು ಕಿವಿಮಾತು ಹೇಳಿದರು.