ಅ.13 ಬೆಳಿಗ್ಗೆ ಅಮ್ಮನವರಿಗೆ ಪ್ರಾಣ ಪ್ರತಿಷ್ಠಾಪನೆ, ದುರ್ಗಾ, ನವಶಕ್ತಿ, ಗೋ ಪೂಜೆಗಳು ಸೇರಿದಂತೆ ಹಲವು ಬಗೆಯ ಹೋಮ ಹವನ ನಡೆಯಲಿವೆ. ದೇಗುಲಕ್ಕೆ ಮತ್ತು ದೇವಿಯ ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರ ಮಾಡು ಜೊತೆಗೆ ಹಲವು ಬಗೆಯ ಅಭಿಷೇಕ ನೇರವೆರಿಸಲಾಗುವುದು. ಮಧ್ಯಾಹ್ನ 12 ಗಂಟೆಗೆ ದೇಗುಲದ ಆವರಣದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಧರ್ಮಸ್ಥಳ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯ ಅವರ ಆಶಿರ್ವಾದಗಳೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಕಾರ್ಯಕ್ರಮದಲ್ಲಿ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಕೃಷ್ಣಪ್ಪ, ಸಂಸದ ಸಿ.ಎಸ್. ಪುಟ್ಟರಾಜು, ಶಾಸಕರಾದ ಡಿ.ಸಿ. ತಮ್ಮಣ್ಣ, ಕೆ.ಟಿ. ಶ್ರೀಕಂಠೇಗೌಡ, ಎನ್. ಅಪ್ಪಾಜಿಗೌಡ, ಗೋಪಾಲಯ್ಯ, ಪ್ರಿಯಾಕೃಷ್ಣ, ಜಿ.ಪಂ. ಸದಸ್ಯ ಎಂ. ಮರಿಹೆಗಡೆ ಸೇರಿ ಇತರರು ಭಾಗವಹಿಸಲಿದ್ದಾರೆ.
‘7 ದಶಕಗಳಿಂದ ದೇವರ ಉತ್ಸವವನ್ನು ಮಾಡಲಾಗುತ್ತಿದ್ದು ಗ್ರಾಮಸ್ಥರ ಮತ್ತು ಕೆಲ ಜನ ಪ್ರತಿನಿಧಿಗಳ ನೆರವಿನೊಂದಿಗೆ ನೂತನ ದೇಗುಲವನ್ನು ನಿರ್ಮಾಣ ಮಾಡಲಾಗಿದೆ. ಗ್ರಾಮಾಭ್ಯುದಯಕ್ಕೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದವಿದೆ’ ಎನ್ನುತ್ತಾರೆ ಗ್ರಾಮದ ಹಿರಿಯ ಮುಖಂಡ ಶೇಖರಪ್ಪ.