ಭೋಪಾಲ: ಕಳೆದ ತಿಂಗಳು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ಆರ್ಎಸ್ಎಸ್ನ ಪ್ರಮುಖರು ಗೌರವ ಸಲ್ಲಿಸಿದರು. ಗುರುವಾರ ಇಲ್ಲಿ ಆರಂಭವಾದ ಸಂಘದ ವಾರ್ಷಿಕ ‘ದೀಪಾವಳಿ ಬೈಠಕ್’ನಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಸ್ರೊದ ಮಾಜಿ ಅಧ್ಯಕ್ಷ ಯು.ಆರ್. ರಾವ್, ಗೌರಿ ಲಂಕೇಶ್ ಸೇರಿದಂತೆ ಅಗಲಿದ ಹಲವು ಗಣ್ಯರಿಗೆ ಗೌರವ ನಮನ ಸಲ್ಲಿಸಿದರು.