ಬೆಂಗಳೂರು: 530ನೇ ಕನಕ ಜಯಂತಿ ಅಂಗವಾಗಿ ಜಗದ್ಗುರು ರೇವಣಸಿದ್ದೇಶ್ವರ ವಿದ್ಯಾಪೀಠದಿಂದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನ.4ರಿಂದ 8ರವರೆಗೆ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ.
ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಠದ ಬಸವರಾಜ ಸ್ವಾಮೀಜಿ, ಉತ್ಸವದಲ್ಲಿ ಕನಕದಾಸರ ಬದುಕು, ಬರಹದ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಕನಕ ಪ್ರಶಸ್ತಿ ನೀಡಲಾಗುತ್ತದೆ ಎಂದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ಈಶ್ವರಪ್ಪ, ಸಚಿವರಾದ ಎಚ್.ಕೆ. ಪಾಟೀಲ, ಎಚ್.ಎಂ.ರೇವಣ್ಣ, ಮಠಾಧೀಶರು, ಶಾಸಕರು ಹಾಗೂ ಸಾಹಿತಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.