ಬೆಂಗಳೂರು: ಇಲ್ಲಿನ ಕಂಠೀರವ ಕ್ರೀಡಾ ನಿಲಯದ ಅಥ್ಲೀಟ್ಗಳಲ್ಲಿ ಡೆಂಗಿ ಹಬ್ಬಿರುವುದು ಬೆಳಕಿಗೆ ಬಂದಿದೆ. ಆರು ವಿದ್ಯಾರ್ಥಿಗಳು ಕಳೆದ ಒಂದು ತಿಂಗಳಿನಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದಾರೆ.
ಇತ್ತೀಚೆಗೆ ಸುರಿದ ಭಾರಿ ಮಳೆ ಯಿಂದಾಗಿ ಕ್ರೀಡಾನಿಲಯದ ಸುತ್ತ ಕೊಳಚೆ ತುಂಬಿಕೊಂಡಿದೆ. ಸೊಳ್ಳೆಗಳ ಕಾಟವೂ ವಿಪರೀತವಾಗಿದೆ. ಡೆಂಗಿ ಜ್ವರ ವ್ಯಾಪಿಸಲು ಇದೇ ಕಾರಣ ಎಂದು ಕೆಲವರು ದೂರಿದ್ದಾರೆ. ಕ್ರೀಡಾ ನಿಲಯದಲ್ಲಿ ಕಳಪೆ ಆಹಾರ ವಿತರಿಸಲಾಗುತ್ತಿದೆ ಎಂದು ಪ್ರತಿಭಟನೆ ಕೂಡ ನಡೆಸಲಾಗಿತ್ತು.
‘ಡೆಂಗಿ ಜ್ವರದ ಸಮಸ್ಯೆ ಹೆಚ್ಚಾಗಿದೆ. ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ವರದಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಪರಿಹಾರ ಸಿಕ್ಕಿಲ್ಲ. ಬಿಬಿಎಂಪಿ ಕೂಡ ಸಮಸ್ಯೆಗೆ ಸ್ಪಂದಿಸಿಲ್ಲ’ ಎಂದು ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.