ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ವಿರುದ್ದ ಆಕ್ಷೇಪಾರ್ಹ ಪೋಸ್ಟ್: ಶಿಕ್ಷಕ ಅಮಾನತು

Last Updated 12 ಅಕ್ಟೋಬರ್ 2017, 19:51 IST
ಅಕ್ಷರ ಗಾತ್ರ

ಕಡೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಶಿಕ್ಷಕ ಎಸ್.ಪಿ.ಹರೀಶ್ ಅವರನ್ನು ಅಮಾನತು ಮಾಡಲಾಗಿದೆ.

ಕೆ.ಎಂ. ರಸ್ತೆಯ ಉರ್ದು ಶಾಲೆಯ ಇಂಗ್ಲಿಷ್‌ ಶಿಕ್ಷಕ ಎಸ್.ಎಂ.ಹರೀಶ್ ಅಮಾನತುಗೊಂಡವರು.

ಮಾತೃಪೂರ್ಣ ಯೋಜನೆಯ ಬಗ್ಗೆ ಮತ್ತು ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿಯಾಗಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ನೋಡಿದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ, ಡಿಡಿಪಿಐ ಅವರಿಗೆ ಮಾಹಿತಿ ನೀಡಿತ್ತು. ಅದರಂತೆ ಡಿಡಿಪಿಐ ಅವರು ಗುರುವಾರ ಹರೀಶ್ ಅವರ ಮೊಬೈಲ್ ಪಡೆದು ಪರಿಶೀಲನೆ ನಡೆಸಿ, ಆಕ್ಷೇಪಾರ್ಹ ಪೋಸ್ಟ್ ಇರುವುದು ಕಂಡುಬಂದ ಕಾರಣ ಅವರನ್ನು ಅಮಾನತು ಮಾಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸತ್ಯನಾರಾಯಣ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT