ಮಾತೃಪೂರ್ಣ ಯೋಜನೆಯ ಬಗ್ಗೆ ಮತ್ತು ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿಯಾಗಿ ಫೇಸ್ಬುಕ್ನಲ್ಲಿ ಪೋಸ್ಟ್ ನೋಡಿದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ, ಡಿಡಿಪಿಐ ಅವರಿಗೆ ಮಾಹಿತಿ ನೀಡಿತ್ತು. ಅದರಂತೆ ಡಿಡಿಪಿಐ ಅವರು ಗುರುವಾರ ಹರೀಶ್ ಅವರ ಮೊಬೈಲ್ ಪಡೆದು ಪರಿಶೀಲನೆ ನಡೆಸಿ, ಆಕ್ಷೇಪಾರ್ಹ ಪೋಸ್ಟ್ ಇರುವುದು ಕಂಡುಬಂದ ಕಾರಣ ಅವರನ್ನು ಅಮಾನತು ಮಾಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸತ್ಯನಾರಾಯಣ ತಿಳಿಸಿದ್ದಾರೆ.