ಇದಕ್ಕಾಗಿ ಹೊಸ ಆ್ಯಪ್ ಸಿದ್ಧಪಡಿಸಲಾಗಿದೆ. ಇಲಾಖೆ ಅಧಿಕಾರಿಗಳು ರೈತರ ಜಮೀನಿಗೆ ಹೋಗಿ 30 ದಿನಗಳಲ್ಲಿ ಮಾಹಿತಿ ಸಂಗ್ರಹಿಸಲಿದ್ದಾರೆ. ರೈತರು ತಮ್ಮ ಆಧಾರ್, ಮೊಬೈಲ್ ಸಂಖ್ಯೆ ಮತ್ತು ಒಪ್ಪಿಗೆ ಪತ್ರ ನೀಡುವ ಮೂಲಕ ಸಹಕಾರ ನೀಡುವಂತೆ ಮನವಿ ಮಾಡಿದರು. ಒಂದು ತಿಂಗಳ ನಂತರ ರೈತರಿಗೆ ಈ ಆ್ಯಪ್ ಉಪಯೋಗ ಸಿಗಲಿದೆ. ರೈತರಿಗೆ ಬೆಳೆ ಪರಿಹಾರ ನೀಡುವಲ್ಲೂ ಇದು ಸಹಕಾರಿಯಾಗಲಿದೆ ಎಂದರು.