16ರಂದು ಬೆಳಿಗ್ಗೆ ಮಲ್ಲಸಂದ್ರದಲ್ಲಿ ಆಂಜನೇಯಸ್ವಾಮಿಗೆ ಬೆಲ್ಲದಾರತಿ, ದೊಡ್ಡದಾರತಿಯೊಂದಿಗೆ ಬಾಗಲಗುಂಟೆ ಮಾರಮ್ಮ ದೇವಸ್ಥಾನದವರೆಗೆ ಮೆರವಣಿಗೆ ನಡೆಯಲಿದೆ. ಹರಕೆ ಹೊತ್ತ ಭಕ್ತರು ಬಾಯಿಗೆ ಬೀಗ ಸೇವೆ, ಅಲಗುಸೇವೆ, ಅಗ್ನಿಕುಂಡದಲ್ಲಿ ನಡೆಯುವುದು, ಸಂಜೆ ಪಳೇಕಮ್ಮ ಮತ್ತು ಮುತ್ತುರಾಯಸ್ವಾಮಿಗೆ ಬೆಲ್ಲದಾರತಿ ಮಾಡಲಾಗುತ್ತದೆ.