ಕಳೆದ 6ರಂದು ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ಕಿತ್ತೂರು ಉತ್ಸವ ಪ್ರಯುಕ್ತ ಅಧಿಕಾರಿಗಳ ಸಭೆ ಆಯೋಜಿಸಿದ್ದರು. ಈ ವೇಳೆ, ಪ್ರತಿಸಲ ಕುಸ್ತಿ ಸ್ಪರ್ಧೆಗೆ ಭೂಮಿ ನೀಡಿದ ಹಾಗೆ ಈ ಬಾರಿಯೂ ನೀಡುವಂತೆ ಜಮೀನಿನ ಮಾಲೀಕರಿಗೆ ವಿನಂತಿಸಿಕೊಳ್ಳಬೇಕು ಎಂದು ಸೂಚಿಸಿದ್ದರು. ಆದರೆ ಯಾರೂ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡಲಿಲ್ಲ ಎಂದು ಕ್ರೀಡಾಪ್ರೇಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.