ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸಕ್ಕೆ ತೆರಳಿದ್ದ ಸಂಕಲ್ಪ ಪದವಿ ಕಾಲೇಜಿನ ವಿದ್ಯಾರ್ಥಿ ಸಾವು

Last Updated 13 ಅಕ್ಟೋಬರ್ 2017, 5:31 IST
ಅಕ್ಷರ ಗಾತ್ರ

ಬಸವಕಲ್ಯಾಣ: ಪ್ರವಾಸಕ್ಕೆ ತೆರಳಿದ್ದ ಇಲ್ಲಿನ ಸಂಕಲ್ಪ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲ್ಲೂಕಿನ ನಿರ್ಗುಡಿ ಗ್ರಾಮದ ಯೋಗೇಶ ವಿಜಯಕುಮಾರ ಶೇಡೋಳೆ (17) ಮೃತಪಟ್ಟವರು.

ಸೋಮವಾರ ಮಹಾರಾಷ್ಟ್ರದ ಅಕಲೂಜ್‌ನಲ್ಲಿನ ವಾಟರ್ ಪಾರ್ಕ್‌ಗೆ ಹೋಗಿದ್ದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು ಆದ್ದರಿಂದ ವಿದ್ಯಾರ್ಥಿ ಕುಸಿದುಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಅಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಶವಪರೀಕ್ಷೆ ವರದಿ ಬಂದಾಗ ಮಾತ್ರ ಎಲ್ಲವೂ ಗೊತ್ತಾಗಲಿದೆ ಎಂದು ಮೃತನ ತಂದೆ ವಿಜಯಕುಮಾರ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT