ಔರಾದ್: ಬೀದರ್– ಔರಾದ್ ರಾಜ್ಯ ಹೆದ್ದಾರಿಯಲ್ಲಿನ ಬರುವ ಕೌಠಾ(ಬಿ) ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಪ್ರಯಾಣಿಕರಲ್ಲಿ ಆತಂಕ ಮನೆಮಾಡಿದೆ. ಸೇತುವೆ ಒಂದು ಭಾಗದ ತಡೆಗೋಡೆ ಕುಸಿದಿದ್ದು, ಜನರಿಗೆ ಆತಂಕ ಶುರುವಾಗಿದೆ. ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ಅವರು ಸೇತುವೆಯ ಸ್ಥಿತಿಗತಿ ಕುರಿತು ಸರ್ಕಾರಕ್ಕೆ ಮಾಹಿತಿ ಸಲ್ಲಿಸಿದ್ದಾರೆ.