ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೃತ ರೈತನ ಕುಟುಂಬಕ್ಕೆ ಪರಿಹಾರ ವಿತರಣೆ

Last Updated 13 ಅಕ್ಟೋಬರ್ 2017, 5:55 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿಯ ರಾಯನಕಲ್ಲು ಗ್ರಾಮದಲ್ಲಿ ಕರಡಿಗಳ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಇತ್ತೀಚೆಗೆ ಮೃತಪಟ್ಟ ರೈತ ಕೇಶವಪ್ಪ ಅವರ ಕುಟುಂಬಕ್ಕೆ ಅರಣ್ಯ ಇಲಾಖೆ ನೀಡಿದ ₹ 5 ಲಕ್ಷ ಪರಿಹಾರದ ಚೆಕ್‌ನ್ನು ಬುಧವಾರ ಶಾಸಕ ಡಾ.ಕೆ.ಸುಧಾಕರ್‌ ಮೃತರ ಕುಟುಂಬದವರಿಗೆ ವಿತರಿಸಿದರು.

ಕೇಶವಪ್ಪ ಅವರ ಮೃತದೇಹದ ಅಂತಿಮ ದರ್ಶನ ಮಾಡಿದ ಸುಧಾಕರ್‌ ಅವರು, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಅವರು ಗ್ರಾಮಕ್ಕೆ ‘ನಿರಂತರ ಜ್ಯೋತಿ’ ಯೋಜನೆ ಸಂಪರ್ಕ ಕೊಡಿಸುವ ಭರವಸೆ ನೀಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಬಾಲಕೃಷ್ಣ, ಮುಖಂಡರಾದ ವೆಂಕಟೇಶ್, ಬೈರರೆಡ್ಡಿ, ಅಪ್ಪಿಗೌಡ, ವಿರೂಪಾಕ್ಷಗೌಡ, ಗಂಗಾಧರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT