ಕಾಫಿ ಮಂಡಳಿ ಅಧ್ಯಕ್ಷ ಬೋಜೇಗೌಡ ಮಾತನಾಡಿ, ‘ಶಂಖು ಹುಳು ಬಾಧೆಯ ಬಗ್ಗೆ ಈಗಾಗಲೇ ಕೇಂದ್ರ ಸಚಿವ ಅನಂತ್ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಕೀಟ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ನೆರವನ್ನು ಕೋರಲಾಗಿದೆ. ಕಾಫಿ ಬೆಳೆಗಾರರು ಹಿಂದೆ ಇಂತಹ ಕೀಟ ಬಾಧೆಗಳನ್ನು ಧೈರ್ಯವಾಗಿ ಎದುರಿಸಿದ್ದು, ಪ್ರಸ್ತುತ ಸಮಯದಲ್ಲೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ, ಕೀಟ ನಿಯಂತ್ರಣಕ್ಕೆ ಮುಂದಾಗಬೇಕು’ ಎಂದರು.