ಮಂಗಳೂರು: ನಗರದ ಹೃದಯಭಾಗ ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆಗಳು ಎದ್ದು ಕಾಣುತ್ತಿವೆ. ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದ ಜಾಗದಲ್ಲಿ ದೊಡ್ಡ ದೊಡ್ಡ ಹೊಂಡಗುಂಡಿಗಳು ಬಿದ್ದಿದ್ದು, ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಬಸ್ ಚಾಲಕರು ನರಕ ಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಈ ಯಾತನೆಯಿಂದ ಮುಕ್ತಿಕೊಡಬೇಕಿದೆ ಎಂದು ಆಗ್ರಹಿಸುತ್ತಿದ್ದಾರೆ.