ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ತಕ್ಷಣ ಬಂಧನಕ್ಕೆ ಅವಕಾಶವಿಲ್ಲ: ಆದೇಶ ಪುನರುಚ್ಛರಿಸಿದ ಸುಪ್ರೀಂ

Last Updated 13 ಅಕ್ಟೋಬರ್ 2017, 10:41 IST
ಅಕ್ಷರ ಗಾತ್ರ

ನವದೆಹಲಿ: ವರದಕ್ಷಿಣೆ ಕಿರುಕುಳ ಆರೋಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ‘ಪರಿಶೀಲನೆ ನಡೆಸದೆ ಆರೋಪಿಗಳನ್ನು ತಕ್ಷಣ ಬಂಧಿಸಬಾರದು’ ಎಂದು ಈ ಹಿಂದೆ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್‌ ಶುಕ್ರವಾರ ಪುನರುಚ್ಛರಿಸಿದೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

‘ಮಹಿಳೆಯರು ನೀಡುವ ದೂರನ್ನು ನಾಗರಿಕ ಸಮಾಜದ ಸದಸ್ಯರು ಇರುವ ಸಮಿತಿ ಪರಿಶೀಲಿಸಬೇಕು. ಇದಕ್ಕಾಗಿ ಪ್ರತಿ ಜಿಲ್ಲೆಯಲ್ಲಿಯೂ ಸಮಿತಿಯನ್ನು ರಚಿಸಬೇಕು. ಸಮಿತಿಯಲ್ಲಿ ನಾಗರಿಕ ಸಮಾಜದ ಸದಸ್ಯರು, ಅಧಿಕಾರಿಗಳ ಪತ್ನಿಯರು, ನಿವೃತ್ತ ಅಧಿಕಾರಿಗಳು ಮತ್ತು ಕಾನೂನು ಸ್ವಯಂ ಸೇವಕರು ಇರಬೇಕು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿತ್ತು.

ಕಳೆದ ಜುಲೈ 27ರಂದು ನೀಡಿದ್ದ ಈ ತೀರ್ಪಿಗೆ ಮಹಿಳಾ ಮತ್ತು ಪುರುಷರ ಹಕ್ಕು ರಕ್ಷಣಾ ಹೋರಾಟಗಾರರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಮಹಿಳಾ ಹಕ್ಕು ಹೋರಾಟಗಾರರು, ಈ ತೀರ್ಪು ವರದಕ್ಷಿಣೆ ಸಮಸ್ಯೆ ವಿರುದ್ಧದ ಹೋರಾಟವನ್ನು ದುರ್ಬಲಗೊಳಿಸಲಿವೆ ಎಂದು ಟೀಕಿಸಿದ್ದರು.

ಮತ್ತೊಂದು ಗುಂಪು ‘ಈ ಆದೇಶ ಕಾನೂನು ಸೌಲಭ್ಯಗಳ ದುರ್ಬಳಕೆಯನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಲಿದೆ’ ಎಂದು ಶ್ಲಾಘಿಸಿತ್ತು.

‘ಅನಗತ್ಯ ಬಂಧನ ಅಥವಾ ಒರಟು ವಿಚಾರಣೆಯಿಂದ ರಕ್ಷಣೆ ಒದಗಿಸಲು ನ್ಯಾಯಾಲಯವು ಈ ಕ್ರಮ ಕೈಗೊಂಡಿದೆ’ ಎಂದು ನ್ಯಾಯಾಲಯ ಆಗ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT