ದೇಗುಲಕ್ಕೆ ಸ್ತ್ರೀಯರಿಗೆ ಪ್ರವೇಶ ನಿರ್ಬಂಧ ಹೇರಿರುವುದರ ಮೂಲಕ ಮಹಿಳಾ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು. ಅದೇ ವೇಳೆ ದೇಗುಲ ಪ್ರವೇಶದ ನಿಯಮಗಳ ಬಗ್ಗೆಯೂ ನ್ಯಾಯಪೀಠ ಪರಿಶೀಲನೆ ನಡೆಸಲಿದೆ. ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠವು ಈ ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಾದ ಅರ್ಜಿಯನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.