ನವದೆಹಲಿ: ಕುಟುಂಬ ಸದಸ್ಯರು ಹಾಗೂ ಸ್ನೇಹಿತರೊಂದಿಗೆ ದೀಪಾವಳಿ ಹಬ್ಬ ಆಚರಣೆಗಾಗಿ ಇದೇ 18 ಮತ್ತು 19ರಂದು ಬಳ್ಳಾರಿಯಲ್ಲಿ ತಂಗಲು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ರೆಡ್ಡಿ ಸಲ್ಲಿಸಿದ್ದ ಮನವಿಗೆ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಹಾಗೂ ಅಶೋಕ್ ಭೂಷಣ್ ಅವರಿದ್ದ ಪೀಠ ಸಮ್ಮತಿ ನೀಡಿದೆ.