ಕವಿವಿ ಕುಲಪತಿ ಡಾ. ಪ್ರಮೋದ ಗಾಯಿ ಅವರ ಕೋರಿಕೆ ಹಾಗೂ ಸಭೆಯಲ್ಲಿದ್ದ ವಿದ್ಯಾರ್ಥಿಗಳ ಕೂಗಿಗೆ ಸ್ಪಂದಿಸಿದ ಆಂಜನೇಯ, ‘ಕರ್ನಾಟಕ ವಿವಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ₹ 9 ಕೋಟಿ ಅನುದಾನ ನೀಡುವ ಭರವಸೆ ನೀಡಿದರು. ಇದರಲ್ಲಿ ವಿದ್ಯಾರ್ಥಿನಿಲಯ ಹಾಗೂ ವಿದ್ಯಾರ್ಥಿವೇತನ, ವಿದೇಶ ಪ್ರವಾಸ, ಉನ್ನತ ವ್ಯಾಸಂಗ ಸೇರಿದೆ’ ಎಂದರು.