ಆದರೆ ಆನೆಯು ಕೆರೆಯಲ್ಲಿ ಮೃತಪಟ್ಟಿತ್ತು. ಸಂಜೆಯ ವೇಳೆಗೆ ಆನೆ ನೀರಿನಿಂದ ಹೊರತೆಗೆಯಲಾಯಿತು. ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸಂತೋಷ್ಕುಮಾರ್ ಮಾತನಾಡಿ, ‘ಈ ಘಟನೆ ಆತಂಕ ತಂದಿದೆ. ಆರೋಗ್ಯವಾಗಿದ್ದ ಅಶ್ವತ್ಥಾಮ ನೀರಿನಲ್ಲಿ ಈಜಾಡುವಾಗ ಮೃತಪಟ್ಟಿದ್ದಾನೆ. ಹೃದಯಾಘಾತ ಅಥವಾ ಪಾರ್ಶ್ವವಾಯು ಆಗಿರುವ ಸಾಧ್ಯತೆಇದೆ. ಮರಣೋತ್ತರ ಪರೀಕ್ಷೆಯಲ್ಲಿ ನಿಖರ ಕಾರಣ ತಿಳಿಯ ಬೇಕಾಗಿದೆ’ ಎಂದರು.