ಕರ್ನಾಟಕ ಮತ್ತು ಗೋವಾ ನೆರೆ ರಾಜ್ಯಗಳಾಗಿದ್ದು, ಉಭಯ ರಾಜ್ಯಗಳ ಜನತೆ ಶಾಂತಿ, ನೆಮ್ಮದಿಯಿಂದ ಸಹಬಾಳ್ವೆ ನಡೆಸಬೇಕು. ಸಹಕಾರ ಒಕ್ಕೂಟ ವ್ಯವಸ್ಥೆಯಡಿ ನಾವೆಲ್ಲರೂ ಇರುವುದರಿಂದ ನೀರು ಹಂಚಿಕೆ ವಿವಾದವನ್ನು ಪರಿಹರಿಸುವುದಕ್ಕಾಗಿ ವೇದಿಕೆ ಸಿದ್ಧಪಡಿಸುವುದು ಸಂವಿಧಾನಾತ್ಮಕ ಹೊಣೆಗಾರಿಕೆಯೂ ಆಗಿದೆ ಎಂದು ಸಚಿವ ಪಾಟೀಲ ಪತ್ರದಲ್ಲಿ ತಿಳಿಸಿದ್ದಾರೆ.