‘2015–16ನೇ ಸಾಲಿನಲ್ಲಿ ಕೈಗೊಂಡಿರುವ ಕಾಮಗಾರಿಗಳಿಗೆ ಇನ್ನೂ ಬಿಲ್ ಪಾವತಿಸಿಲ್ಲ. ಗುತ್ತಿಗೆದಾರರಿಗೆ ಒಟ್ಟು ₹700 ಕೋಟಿ ಬಾಕಿ ಪಾವತಿಸಬೇಕಿದೆ. ಬಿಲ್ ಪಾವತಿಸದ ಕಾರಣ ಗುತ್ತಿಗೆದಾರರು ಯಾವುದೇ ಟೆಂಡರ್ಗಳಲ್ಲಿ ಭಾಗವಹಿಸುತ್ತಿಲ್ಲ. ಇದರಿಂದ ವಾರ್ಡ್ ಮಟ್ಟದ ಕಾಮಗಾರಿಗಳು ಬಾಕಿ ಉಳಿದಿವೆ’ ಎಂದು ಸಂಪತ್ ರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.