ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಾಭಿವೃದ್ಧಿಗೆ ಹೆಚ್ಚಿನ ಆದ್ಯತೆ: ರಮೇಶ ಜಾರಕಿಹೊಳಿ

Last Updated 14 ಅಕ್ಟೋಬರ್ 2017, 5:27 IST
ಅಕ್ಷರ ಗಾತ್ರ

ಘಟಪ್ರಭಾ: ಇಲ್ಲಿಗೆ ಸಮೀಪದ ಮಲ್ಲಾಪೂರ ಪಿ.ಜಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಡಿ.ಎಂ.ದಳವಾಯಿ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಗ್ರಾಮಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಈ ನಿಟ್ಟಿನಲ್ಲಿ ವಿವಿಧ ಯೋಜನೆಗಳ ಅಡಿ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಇನ್ನೂ ಹೆಚ್ಚಿನ ಅನುದಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದರು.

ಪಟ್ಟಣ ಪಂಚಾಯ್ತಿ ಸದಸ್ಯರಾದ ಸಲೀಂ ಕಬ್ಬೂರ, ನಾಗರಾಜ ಚಚಡಿ, ಇಮ್ರಾನ್ ಬಟಕುರ್ಕಿ, ಗಂಗಾಧರ ಬಡಕುಂದ್ರಿ, ರಾಮಣ್ಣ ನಾಯಿಕ, ವಿಕ್ರಮ ದಳವಾಯಿ, ಗ್ರಾಮದ ಹಿರಿಯರಾದ ಸುಭಾಸ ಹುಕ್ಕೇರಿ, ಪ್ರಕಾಶ ಡಾಂಗೆ, ಸುರೇಶ ಪೂಜೇರಿ, ಶೇಖರ ಕುಲಗೋಡ, ಬೀರಪ್ಪ ಡಬಾಜ, ಧುಪದಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಸ್.ಐ.ಬೆನವಾಡಿ, ಸದಸ್ಯ ನಾಗರಾಜ ನಾಯಿಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT