ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನಲ್ಲಿ ಮುಳುಗಿ ಬಾಲಕ ಸಾವು

Last Updated 14 ಅಕ್ಟೋಬರ್ 2017, 5:31 IST
ಅಕ್ಷರ ಗಾತ್ರ

ಹೂವಿನಹಡಗಲಿ: ತಾಲ್ಲೂಕಿನ ಉತ್ತಂಗಿ ಗ್ರಾಮದಲ್ಲಿ ಆಕಳ ಮೈತೊಳೆಯಲು ಹಳ್ಳಕ್ಕೆ ಇಳಿದಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಶುಕ್ರವಾರ ಸಾವನ್ನಪ್ಪಿದ್ದಾನೆ.
ಎಸ್.ಎಂ. ವಾಗೀಶಯ್ಯ ವೃಷಬೇಂದ್ರಯ್ಯ (12) ಮೃತ ಬಾಲಕ. ತಳಕಲ್ಲು ರಸ್ತೆಯಲ್ಲಿರುವ ಸುಂಕಮ್ಮನ ಹಳ್ಳದಲ್ಲಿ ಈ ದುರ್ಘಟನೆ ಸಂಭವಿಸಿದೆ.

‘ಗ್ರಾವೆಲ್‌ಗಾಗಿ ಹಳ್ಳದಲ್ಲಿ ಭಾರಿ ಕಂದಕಗಳನ್ನು ತೋಡಲಾಗಿದ್ದು, ಈಚೆಗೆ ಮಳೆ ಬಂದಿರುವುದರಿಂದ ಗುಂಡಿಗಳು ತುಂಬಿಕೊಂಡಿವೆ. ಗುಂಡಿಯ ಆಳ ಗುರುತಿಸಲು ಸಾಧ್ಯವಾಗದೇ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT