ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರರಾಣಿ ಕಿತ್ತೂರ ಚನ್ನಮ್ಮ ಜಯಂತ್ಯುತ್ಸವ 23ಕ್ಕೆ

Last Updated 14 ಅಕ್ಟೋಬರ್ 2017, 9:20 IST
ಅಕ್ಷರ ಗಾತ್ರ

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ್ತಿ, ವೀರರಾಣಿ ಕಿತ್ತೂರ ಚನ್ನಮ್ಮ ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಇದೇ 23ರಂದು ಜಿಲ್ಲಾಡಳಿತದ ವತಿಯಿಂದ ಸಡಗರದಿಂದ ಜಿಲ್ಲೆಯಾದ್ಯಂತ ಆಚರಿಸಲು ನಿರ್ಧರಿಸಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಗಿದ್ದು, ಜಿಲ್ಲಾಡಳಿತ, ತಾಲ್ಲೂಕು ಆಡಳಿತಗಳು ಎಲ್ಲ ಸಮುದಾಯದ ಜನರನ್ನು ಒಗ್ಗೂಡಿಸಿ, ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ ಸೂಚಿಸಿದರು.

ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದು, ಸೂಕ್ತ ಸಲಹೆಗಳನ್ನು ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತದಾರ ಸ್ವಾಗತಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT