ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌: ಕರ್ನಾಟಕ–ಆಂಧ್ರ ಪೈಪೋಟಿ

Last Updated 14 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕರ್ನಾಟಕ ಮತ್ತು ಆಂಧ್ರ ತಂಡಗಳ ನಡುವಣ 23 ವರ್ಷದ ಒಳಗಿನವರ ಸಿ.ಕೆ. ನಾಯ್ಡು ಟ್ರೋಫಿ ನಾಲ್ಕು ದಿನಗಳ ಕ್ರಿಕೆಟ್‌ ಪಂದ್ಯ ಭಾನುವಾರ ಆರಂಭವಾಗಲಿದೆ.

 ಇಲ್ಲಿನ ರಾಜನಗರದಲ್ಲಿರುವ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಯಾಗಿದ್ದು, ಮಳೆಯ ಭೀತಿ ಎದುರಾಗಿದೆ.

ಶನಿವಾರ ಸಂಜೆಯಿಂದ ಸುರಿದ ಮಳೆಗೆ ಮೈದಾನದಲ್ಲೆಲ್ಲಾ ನೀರು ನಿಂತುಕೊಂಡಿತ್ತು. ಆದ್ದರಿಂದ ಕರ್ನಾಟಕ ತಂಡದವರು ಕೆಲವೇ ನಿಮಿಷ ಅಭ್ಯಾಸ ಮಾಡಿದರು. ಮಧ್ಯಾಹ್ನ ಆಂಧ್ರ ತಂಡದವರು ದೈಹಿಕ ಕಸರತ್ತಿಗೆ ಒತ್ತುಕೊಟ್ಟರು.

ರಾಜ್ಯ ತಂಡದ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗಗಳಲ್ಲಿ ಬಲಿಷ್ಠವಾಗಿದ್ದು ಆಂಧ್ರ ತಂಡವನ್ನು ಸುಲಭವಾಗಿ ಕಟ್ಟಿಹಾಕುವ ವಿಶ್ವಾಸ ಹೊಂದಿದೆ. ಉಭಯ ತಂಡಗಳ ನಡುವಣ ಈ ಪಂದ್ಯದ ಬೆಳಿಗ್ಗೆ 9.30ಕ್ಕೆ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT