‘ಮಡಕೆ, ಕುಡಿಕೆ, ಚಪ್ಪಲಿ, ಖಾದಿ ಬಟ್ಟೆ, ಕೈಮಗ್ಗ ಉತ್ಪನ್ನ, ಕಂಬಳಿ ಉತ್ಪನ್ನಗಳಿಗೂ ಸರಕು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಲಾಗಿದೆ. ಕೇಂದ್ರ ಸರ್ಕಾರದ ಈ ಕ್ರಮ ಅಮಾನವೀಯ. ದೊಡ್ಡ ಹೂಡಿಕೆದಾರರ ಮುಂದೆ ರೈತರು, ಗುಡಿಕೈಗಾರಿಕೆಗಳ ಶ್ರಮಿಕರು ನಿಲ್ಲಲು ಸಾಧ್ಯವಿಲ್ಲ. ಕೂಡಲೇ ಇವುಗಳನ್ನು ಶೂನ್ಯ ಕರ ವ್ಯಾಪ್ತಿಗೆ ತರಬೇಕು’ ಎಂದು ಆಗ್ರಹಿಸಿದರು.