ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ‍ಪುತ್ರರ ವಿರುದ್ಧ ದೂರು

Last Updated 14 ಅಕ್ಟೋಬರ್ 2017, 19:44 IST
ಅಕ್ಷರ ಗಾತ್ರ

ಬೆಂಗಳೂರು: ಶಿಕಾರಿಪುರ ತಾಲ್ಲೂಕಿನ ನಂದಿಹಳ್ಳ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯು ಕೆರೆ ಜಾಗವನ್ನು ಒತ್ತುವರಿ ಮಾಡಿದೆ ಎಂದು ಆರೋಪಿಸಿ ಎನ್‌.ಹನುಮೇಗೌಡ ಎಂಬುವರು ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೂರು ಸಲ್ಲಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರರಾದ ಬಿ.ವೈ. ರಾಘವೇಂದ್ರ (ಸಂಸ್ಥೆಯ ಗೌರವಾಧ್ಯಕ್ಷ), ಬಿ.ವೈ. ವಿಜಯೇಂದ್ರ (ಖಜಾಂಬಿ), ಅಧ್ಯಕ್ಷ ಬಿ. ಶಿವಕುಮಾರ್‌ ಹಾಗೂ ಕಾರ್ಯದರ್ಶಿ ತೇಜಸ್ವಿನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಒತ್ತುವರಿ ತೆರವು ಮಾಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT