ವಿಷಾಹಾರ ಸೇವನೆಯಿಂದ ಹಲವು ಪ್ರಯಾಣಿಕರು ಅಸ್ವಸ್ಥಗೊಂಡಿರುವ ಕುರಿತು ಸಹ ಪ್ರಯಾಣಿಕರು ರೈಲ್ವೆ ಇಲಾಖೆಗೆ ಸಂದೇಶ ರವಾನಿಸಿದ್ದಾರೆ. ಚಿಪ್ಲುನ್ ರೈಲ್ವೆ ನಿಲ್ದಾಣದಲ್ಲಿ ನಂ.22120 ತೇಜಸ್ ಎಕ್ಸ್ಪ್ರೆಸ್ನ ಪ್ರಯಾಣಿಕರಿಗೆ ರೈಲ್ವೆ ವೈದ್ಯರು ಚಿಕಿತ್ಸೆ ನೀಡಿರುವುದಾಗಿ ಭಾರತೀಯ ರೈಲ್ವೆ ಆಹಾರ ಪೂರೈಕೆ ಮತ್ತು ಪ್ರವಾಸ ನಿಗಮ(ಐಆರ್ಸಿಟಿಸಿ) ಅಧಿಕೃತ ಪ್ರಕಟಣೆ ಹೊರಡಿಸಿದೆ.