‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಯಾರೋ ಒಬ್ಬ ವ್ಯಕ್ತಿ ಅದನ್ನು ನಿರ್ಧರಿಸುವುದಿಲ್ಲ. ಕಾಂಗ್ರೆಸ್ ಯಾರೊಬ್ಬರ ಆಸ್ತಿ ಅಲ್ಲ, ಸಾರ್ವಜನಿಕರ ಪಕ್ಷ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುತ್ತಿರುವ, ಜನರೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ಹಾಗೂ ಗೆಲ್ಲಬಹುದಾದ ಸಾಮರ್ಥ್ಯವಿರುವ ಅಭ್ಯರ್ಥಿಗೆ ಟಿಕೆಟ್ ದೊರೆಯುತ್ತದೆ. ಪಕ್ಷದ ಅಭ್ಯರ್ಥಿಯನ್ನು ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಬೆಂಬಲಿಸಬೇಕು’ ಎಂದು ಸೂಚಿಸಿದರು.