‘ಕೆಎಸ್ಒಯು ಮುಚ್ಚುವುದಾಗಿ ಉನ್ನತ ಶಿಕ್ಷಣ ಸಚಿವ ಬಸವರಾಯ ರಾಯರಡ್ಡಿ ನೀಡಿರುವ ಬೇಜವಾಬ್ದಾರಿ ಹೇಳಿಕೆ ಖಂಡನೀಯ. ವಿಶ್ವವಿದ್ಯಾಲಯವನ್ನು ಉಳಿಸುವುದಕ್ಕಿಂತ ಅಲ್ಲಿನ ಹಣವನ್ನು ವಶಕ್ಕೆ ತೆಗೆದುಕೊಳ್ಳುವುದು ಅವರಿಗೆ ಮುಖ್ಯವಾಗಿದೆ. ವಿಶ್ವವಿದ್ಯಾಲಯದ ಖಾತೆಯಲ್ಲಿ ಸುಮಾರು ₹ 600 ಕೋಟಿ ಹಣ ಲಭ್ಯವಿದ್ದು, ಇದನ್ನು ಬೇರೆ ಕಾಲೇಜು, ಕಟ್ಟಡಗಳಿಗೆ ಬಳಸುವುದಕ್ಕೆ ಅನುವಾಗುವಂತೆ ಸಮಿತಿಯನ್ನೂ ರಚಿಸಿದ್ದಾರೆ’ ಎಂದು ಪತ್ರದಲ್ಲಿ ಆಕ್ಷೇಪಿಸಿದ್ದಾರೆ.