ಬೆಂಗಳೂರು: ಸ್ಪೀಕರ್ ಕಚೇರಿ ಮತ್ತು ಸರ್ಕಾರದ ತಿಕ್ಕಾಟದ ನಡುವೆಯೆ ನಡೆಯುತ್ತಿರುವ ವಿಧಾನಸೌಧ ವಜ್ರಮಹೋತ್ಸವದ ಸವಿನೆನಪಿಗಾಗಿ ಶಾಸಕರಿಗೆ ತಲಾ ₹50,000 ಮೌಲ್ಯದ ಚಿನ್ನದ ಬಿಸ್ಕತ್, ಸಿಬ್ಬಂದಿಗೆ ತಲಾ ₹5,000 ಮೌಲ್ಯದ ಬೆಳ್ಳಿ ತಟ್ಟೆ ಉಡುಗೊರೆಯಾಗಿ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಲಾಗಿತ್ತು. ಈಗ ಇಂತಹ ಯಾವುದೆ ಪ್ರಸ್ತಾಪ ಇಲ್ಲ ಎಂದು ಸ್ಪೀಕರ್ ಸ್ಪಷ್ಟನೆ ನೀಡಿದ್ದಾರೆ.