ಮೈಸೂರು: ವಿಧಾನಸೌಧ ಅಡವಿಟ್ಟು ಹಣ ತರುವ ಸ್ಥಿತಿ ಬಂದಿದೆ ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿರುವುದು ಅವರ ಗೌರವಕ್ಕೆ ಧಕ್ಕೆ ತರುವ ವಿಚಾರ ಎಂದು ಮೈಸೂರು ಪೇಂಟ್ ಮತ್ತು ವಾರ್ನಿಷ್ ಲಿಮಿಟೆಡ್ ಅಧ್ಯಕ್ಷ ಎಚ್.ಎ.ವೆಂಕಟೇಶ್ ಟೀಕಿಸಿದ್ದಾರೆ.
ರಾಜ್ಯ ಸರ್ಕಾರದ ಹಣಕಾಸು ಪರಿಸ್ಥಿತಿ ಕುರಿತು ಮಾತನಾಡುವ ಅವರು, ಮೊದಲು ರಾಜ್ಯದ ತೆರಿಗೆ ಹಕ್ಕಿನ ಹಣವನ್ನು ಮೊದಲು ಬಿಡುಗಡೆ ಮಾಡಿಸಲಿ. ಎಲ್ಲ ರಾಜ್ಯ ಸರ್ಕಾರಗಳನ್ನು ಸಮಾನದೃಷ್ಟಿಯಿಂದ ನೋಡುವಂತೆ ಕೇಂದ್ರ ಸರ್ಕಾರಕ್ಕೆ ಬುದ್ಧಿ ಹೇಳಲಿ ಎಂದು ಅವರು ಸಲಹೆ ನೀಡಿದ್ದಾರೆ.
ಪಂಜಾಬಿನ ಗುರುದಾಸ್ಪುರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಬಿಜೆಪಿಯಲ್ಲಿ ನಡುಕ ಮೂಡಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ