ರಾಜಕಾಲುವೆಗಳ ಒತ್ತುವರಿ ಆಗಿರುವ ಕಾರಣ, ಮಳೆ ನೀರು ಹರಿಯದೆ ಮನೆಗಳಿಗೆ ನುಗ್ಗುತ್ತಿದೆ ಎಂದು ಅಳಲು ತೋಡಿಕೊಂಡರು. ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, ಸೋಮವಾರ ಜಿಲ್ಲಾಧಿಕಾರಿ ಡಿ.ರಂದೀಪ್ ಅವರ ಸಮಕ್ಷಮದಲ್ಲಿ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು. ಒತ್ತುವರಿ ಆಗಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡುವಂತೆ ಅವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.