ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಂಕಿತರ ರೇಖಾಚಿತ್ರದಲ್ಲಿ ಕುಂಕುಮ–ಆಕ್ಷೇಪ

Last Updated 16 ಅಕ್ಟೋಬರ್ 2017, 9:56 IST
ಅಕ್ಷರ ಗಾತ್ರ

ಉಡುಪಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಶಂಕಿತರ ರೇಖಾಚಿತ್ರದಲ್ಲಿ ಆರೋಪಿಯೊಬ್ಬನ ಹಣೆಯ ಮೇಲೆ ಕುಂಕುಮ ಪ್ರದರ್ಶನ ಮಾಡಿರುವುದಕ್ಕೆ ವಿಶ್ವ ಹಿಂದೂ ಪರಿಷತ್‌ನ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಗಳು ಹಿಂದೂ ಸಂಘಟನೆಗಳಿಗೆ ಸೇರಿದವರು ಎಂದು ಬಿಂಬಿಸುವ ರಾಜಕೀಯ ಹುನ್ನಾರವನ್ನು ಸರ್ಕಾರ ಮಾಡುತ್ತಿದೆ ಎಂದರು.

‘ಗೌರಿ ಹತ್ಯೆ ಬಗ್ಗೆ ನಮಗೂ ದಃಖವಿದೆ. ಅವರ ಹತ್ಯೆಯ ಬಗ್ಗೆ ಸರಿಯಾದ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ನಾವೂ ಬಯಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT