ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಂತ್‌ಕುಮಾರ್ ಭೇಟಿ ಮಾಡಿದ ಸಚಿವ ಪ್ರಮೋದ್‌

Last Updated 16 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಉಡುಪಿ: ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿಯ ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರನ್ನು ಸೋಮವಾರ ಭೇಟಿ ಮಾಡಿದರು.

ಬ್ರಹ್ಮಾವರದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಉಡುಪಿಗೆ ಬಂದಿದ್ದ ಕೇಂದ್ರ ಸಚಿವರು ಪ್ರವಾಸಿ ಮಂದಿರದಲ್ಲಿ ಕೆಲ ಕಾಲ ಉಳಿದಿದ್ದರು. ಆ ಸಂದರ್ಭದಲ್ಲಿಯೇ ಪ್ರಮೋದ್ ಅವರೂ ಪ್ರವಾಸಿ ಮಂದಿರಕ್ಕೆ ಹೋದಾಗ ಭೇಟಿ ಮಾಡಿದರು. ಕೆಲ ಹೊತ್ತು ಲೋಕಾಭಿರಾಮವಾಗಿ ಮಾತನಾಡಿದರು ಎಂದು ತಿಳಿದು ಬಂದಿದೆ.

ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ಇದ್ದರು.

ಪ್ರಮೋದ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT