ಪರೀಕ್ಷಾ ಅಕ್ರಮ ಕುರಿತು ಖಚಿತ ಮಾಹಿತಿ ಆಧರಿಸಿ ಸೋಮವಾರ ಮಧ್ಯಾಹ್ನ ಹೆಚ್ಚುವರಿ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ನೇತೃತ್ವದ ತಂಡ 2 ಪರೀಕ್ಷಾ ಕೇಂದ್ರದ ಮೇಲೆ ದಾಳಿ ನಡೆಸಿತು. ಈ ಸಂದರ್ಭ ನೂತನ ಕಾಲೇಜಿನಲ್ಲಿ ಚನ್ನಗಿರಿ ತಾಲ್ಲೂಕಿನ ಬೆಳಲಗೆರೆಯ ಡಿ.ಶ್ರೀನಿವಾಸ್, ದಾವಣಗೆರೆ ತಾಲ್ಲೂಕಿನ ಒಬಜ್ಜಿಹಳ್ಳಿಯ ಸುಭಾಷ್ ಸಿಕ್ಕಿಬಿದ್ದಿದ್ದಾರೆ. ಮತ್ತೊಂದೆಡೆ, ಮಿಲ್ಲತ್ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಚನ್ನಗಿರಿ ತಾಲ್ಲೂಕಿನ ಮಿಯಾಪುರದ ಆರ್.ತಿಪ್ಪೇಶ್ ನಾಯ್ಕ ಸಿಕ್ಕಿಬಿದ್ದಿದ್ದಾನೆ.