ಮಾತೆ ಮಹಾದೇವಿ ಅವರು ಮಾತನಾಡಿ, ‘ಈಗಾಗಲೇ ವಚನದೀಪ್ತಿ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದರಿಂದ ಅದನ್ನು ಇನ್ನು ಮುಂದೆ ಪ್ರಕಟಿಸುವುದಿಲ್ಲ’ ಎಂದು ಭರವಸೆ ನೀಡಿದರು. ‘ಮಾತೆ ಮಹಾದೇವಿ ಅವರು ಕ್ಷಮೆ ಯಾಚಿಸಬೇಕು’ ಎಂದು ಪಟ್ಟು ಹಿಡಿದಾಗ ತ್ವೇಷಮಯ ವಾತಾವರಣ ಉಂಟಾಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಯಾಗಿಸಿದರು.