ಬೆಂಗಳೂರು: ‘ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಪ್ರಾದೇಶಿಕ ಪಕ್ಷ ಅಧಿಕಾರ ಹಿಡಿಯುವ ಅನಿವಾರ್ಯ ಇದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ದುರಾಡಳಿತದಿಂದ ಬೇಸತ್ತಿರುವ ಜನತೆ, ಈ ಬಾರಿ ಸಿಡಿದೆದ್ದು ಜೆಡಿಎಸ್ ಬೆಂಬಲಿಸಲಿದ್ದಾರೆ’ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.